ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಗುಂಪುಗಳು ನಿರಂತರವಾಗಿ ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಕದನ ವಿರಾಮದ ನಿಯಮ ಜಾರಿಯಲ್ಲಿರುವ ಹೊರತಾಗಿಯೂ ಒಳನುಸುಳುವ ಪ್ರಯತ್ನವನ್ನು ನಡೆಸುತ್ತಿವೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ದಿಲ್ಭಾಗ್ ಸಿಂಗ್ ತಿಳಿಸಿದ್ದಾರೆ.