ಕೋವಿಡ್ ಕಾರಣಕ್ಕೆ ಜಿಲ್ಲೆಯ ಪ್ರವಾಸಿ ತಾಣಗಳನ್ನು ಸತತ 74 ದಿನಗಳ ಮುಚ್ಚಲಾಗಿತ್ತು. ಪ್ರವಾಸಿಗರ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು. ಈಗ ನಿರ್ಬಂಧ ತೆರವುಗೊಳಿಸಿದ್ದರೂ ಪ್ರವಾಸಿಗರು ಉತ್ಸಾಹ ತೋರುತ್ತಿಲ್ಲ. ಬಾದಾಮಿ, ಪಟ್ಟದಕಲ್ಲು, ಐಹೊಳೆ ವಿಶ್ವದ ಪ್ರವಾಸೋದ್ಯಮ ನಕ್ಷೆಯಲ್ಲಿ ಸ್ಥಾನ ಪಡೆದಿದ್ದರೂ ವಿದೇಶಿಯರು ಈ ನೆಲೆಗಳಿಗೆ ಭೇಟಿ ನೀಡಿ ಎರಡು ವರ್ಷಗಳು ಕಳೆದಿದೆ.