‘ಮುಖ್ಯಮಂತ್ರಿ, ಸಚಿವರನ್ನು ನಮ್ಮ ಮನೆಗೆ ಬನ್ನಿ ಎಂದು ಕರೆದಿಲ್ಲ. ವಿರೋಧ ಪಕ್ಷಗಳ ನಾಯಕರ ಮನೆಗೆ ಭೇಟಿ ನೀಡಿದರೆ, ಅವರದ್ದೇ ಪಕ್ಷದ ನಾಯಕರಿಂದ ಅವರು ಬೈಯಿಸಿಕೊಳ್ಳಬೇಕಾಗುತ್ತದೆ’ ಎಂದು ರೇವಣ್ಣ ವ್ಯಂಗ್ಯವಾಡಿದರು.
ಕೃಷಿ ಮೂಲಭೂತ ಸೌಕರ್ಯಕ್ಕೆ ಕೇಂದ್ರ ಬಜೆಟ್ನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದನ್ನೇ ಕಾರಣವಾಗಿಟ್ಟುಕೊಂಡು ‘ಹೊಂದಾಣಿಕೆ ರಾಜಕಾರಣ’ ಎಂಬ ಸ್ಥಳೀಯ ಶಾಸಕ ಪ್ರೀತಂ ಗೌಡ ನೀಡಿದ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸದ್ದು ಮಾಡುತ್ತಿದೆ.
ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಸನದಲ್ಲಿ ಚುನಾವಣೆ ಮಾಡಿದ್ದೆ. ಆಗ ಇವರೆಲ್ಲ ಎಲ್ಲಿದ್ದರೋ ಗೊತ್ತಿಲ್ಲ. ದೇವಗೌಡರು ಈ ರಾಜ್ಯದ ಮುತ್ಸದ್ದಿ ನಾಯಕ. ಮಾಜಿ ಪ್ರಧಾನಿ ದೇವೇಗೌಡರ ಹಿರಿತನಕ್ಕೆ ಗೌರವ ಕೊಡಬೇಕು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.