ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು, ಕೇಂದ್ರದಲ್ಲಿ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ಅ. 1ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸತ್ಯಾಗ್ರಹ ಆರಂಭಿಸುವುದು ನಿಶ್ಚಿತ ಎಂದು ಹೋರಾಟದ ನೇತೃತ್ವ ವಹಿಸಿರುವ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರಕಟಿಸಿದರು.